ಆ್ಯಪ್ನಗರ

ಇಂಡೋನೇಷ್ಯಾ: ನಿಟ್ಟುಸಿರು ಬಿಟ್ಟ ಪ್ರವಾಸಿಗರು..ಯಾಕೆ?

ಇಂಡೋನೇಷ್ಯಾ ಕೆಲವು ದಿನಗಳ ಹಿಂದೆ ವಿವಾಹ ಪೂರ್ವ ಲೈಂಗಿಕತೆಗೆ ಕಠಿಣವಾದ ಕಾನೂನನ್ನು ಜಾರಿಗೊಳಿಸುವ ಹಂತದಲ್ಲಿತ್ತು. ಅದು ಪ್ರವಾಸಿಗರಿಗೂ ಅನ್ವಯವಾಗುತ್ತಾ ಎಂಬ ಅನುಮಾನವಿತ್ತು. ಅದರ ಬಗ್ಗೆ ಕಂಪ್ಲೀಟ್ ಡೀಟೈಲ್ಸ್‌ ಇಲ್ಲಿದೆ ಓದಿ.

Authored by ಸೌಮ್ಯ ಟೇಮ್ಕರ್ | Vijaya Karnataka Web 16 Dec 2022, 5:53 pm
PC: Pixabay
Vijaya Karnataka Web indonesia
indonesia


ಇಂಡೋನೇಷ್ಯಾ ಕೆಲವು ದಿನಗಳ ಹಿಂದೆ ವಿವಾಹ ಪೂರ್ವ ಲೈಂಗಿಕ ಕ್ರಿಯೆಯಲ್ಲಿ ಸಿಕ್ಕಿಬಿದ್ದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸುವ ನಿಯಮದ ಬಗ್ಗೆ ಚಿಂತನೆ ನಡೆಸುತ್ತಿತ್ತು. ಇದೊಂದು ಹೊಸ ಕ್ರಿಮಿನಲ್‌ ಕೋಡ್‌ ಆಗಿದ್ದು, ಇಂಡೋನೇಷ್ಯಾದ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೂ ಅನ್ವಯವಾಗಲಿದೆಯೇ ಎಂಬ ಗೊಂದಲ ಏರ್ಪಟ್ಟಿತ್ತು. ಅಷ್ಟೇ ಅಲ್ಲ, ಪ್ರವಾಸೋದ್ಯಮ ಇಲಾಖೆಯ ವಿಮರ್ಶಕರು “ ಇದು ಮಾನವ ಹಕ್ಕುಗಳ ಉಲ್ಲಂಘನೆ” ಎಂದೂ ಸಹ ಅಭಿಪ್ರಾಯಪಟ್ಟಿದ್ದರು.

ಒಂದು ವೇಳೆ ಈ ಕೋಡ್‌ ಜಾರಿಗೆ ಬಂದಿದ್ದರೆ ಇಂಡೋನೇಷ್ಯಾದ ಪ್ರವಾಸಕ್ಕೆ ಭಾರೀ ಹೊಡೆತ ಬೀಳುತ್ತಿತ್ತು ಎಂದು ಎಲ್ಲೆಡೆ ಕೇಳಿಬರುತ್ತಿತ್ತು. ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ್ ನೆಡ್ ಪ್ರೈಸ್‌ ಅವರು ಕೂಡ ಈ ವಿಷಯದ ಬಗ್ಗೆ ಮಧ್ಯಮಗಳ ಎದುರು ಕಳವಳ ವ್ಯಕ್ತ ಪಡಿಸಿದ್ದರು. ಆದರೆ ಆ ಎಲ್ಲಾ ಗೊಂದಲಕ್ಕೆ ಈಗ ಉತ್ತರ ದೊರೆತಿದೆ.

ಅದೇನೆಂದರೆ, ಇಂಡೋನೇಷ್ಯಾದ ಬಾಲಿಗೆ ಭೇಟಿ ನೀಡುವ ಮಂದಿಗೆ ದೇಶದ ಕ್ರಿಮಿನಲ್‌ ಕೋಡ್‌ನಿಂದಾಗಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಗವರ್ನರ್ ಹೇಳಿದ್ದಾರೆ. ಈಗಾಗಲೇ ಅವಿವಾಹಿತ ದಂಪತಿಗಳ ನಡುವೆ ಲೈಂಗಿಕ ಕ್ರಿಯೆಯನ್ನು ನಿಷೇಧಿಸುವ ವಿವಾದಾತ್ಮಕ ಮಸೂದೆಯು ಇಂಡೋನೇಷ್ಯಾದ ಸಂಸತ್ತು ಕಳೆದ ವಾರವೇ ಅಂಗೀಕಾರ ಮಾಡಿದೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕರು 3.5 ಗಂಟೆ ಮುಂಚಿತವಾಗಿ ತಲುಪಬೇಕು…ಯಾಕೆ?

ಈ ಕಾನೂನು 3 ವರ್ಷಗಳ ಮಟ್ಟಿಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂಬುದನ್ನು ನಾವು ನಿಮಗೆ ಹೇಳಲೇಬೇಕು. ಇಂಡೋನೇಷ್ಯಾದ ಪ್ರವಾಸಕ್ಕೆ ಭೇಟಿ ನೀಡುವ ಅತಿ ಹೆಚ್ಚು ಮಂದಿ ಬಾಲಿಗೆ ಹೋಗುತ್ತಾರೆ. ಈ ಕಾರಣದಿಂದ ಬಾಲಿಗೆ ಹೋಗುವ ಪ್ರವಾಸಿಗರ ಗೌಪತ್ಯೆಯನ್ನು ಕಾಪಾಡುವುದು ಮಾತ್ರವಲ್ಲ, ವಿಲ್ಲಾಗಳು, ಹೋಟೆಲ್‌ಗಳು, ಅತಿಥಿ ಗೃಹಗಳು, ಅಪಾರ್ಟ್‌ಮೆಂಟ್‌ಗಳು, ಲಾಡ್ಜ್‌ಗಳು ಮತ್ತು ಸ್ಪಾಗಳಂತಹ ಯಾವುದೇ ಪ್ರವಾಸೋದ್ಯಮ ವಸತಿಗಳಲ್ಲಿ ಚೆಕ್-ಇನ್ ಮಾಡಿದ ನಂತರ ವೈವಾಹಿಕ ಸ್ಥಿತಿಯನ್ನು ಪರಿಶೀಲಿಸಲಾಗುವುದಿಲ್ಲ ಎಂದು ಬಾಲಿ ಸರ್ಕಾರವು ಖಚಿತಪಡಿಸಿದೆ. ಬಾಲಿಯ ಈ ನಡೆಯಿಂದ ಪ್ರವಾಸಿಗರು ನಿಟ್ಟುಸಿರು ಬಿಡುವಂತಾಗಿದೆ. ಒಟ್ಟಾರೆ ಈ ಕೋಡ್‌ ಇಂಡೋನೇಷ್ಯಾದ ಪ್ರವಾಸೋದ್ಯಮಕ್ಕೆ ಹೊಡೆತ ಬೀಳುವುದನ್ನು ತಪ್ಪಿಸಿತು ಎಂದೇ ಹೇಳಬಹುದು.

ಇದನ್ನೂ ಓದಿ: ಮದುವೆಗಿಂತ ಮುಂಚೆ ಲೈಂಗಿಕ ಕ್ರಿಯೆಯಲ್ಲಿ ಸಿಕ್ಕಿ ಬಿದ್ದರೆ 1 ವರ್ಷ ಜೈಲು ಶಿಕ್ಷೆ

ಲೇಖನವನ್ನು ಇಂಗ್ಲೀಷ್‌ನಲ್ಲಿ ಓದಲು ಇಲ್ಲಿ ಕ್ಲಿಕ್‌ ಮಾಡಿ.
ಲೇಖಕರ ಬಗ್ಗೆ
ಸೌಮ್ಯ ಟೇಮ್ಕರ್
ಸೌಮ್ಯ ಟೇಮ್ಕರ್ ಅವರು ತಮ್ಮ ಉದ್ಯಮದಲ್ಲಿ 4 ವರ್ಷಗಳ ಅನುಭವ ಹೊಂದಿರುವ ಮಾಧ್ಯಮ ವೃತ್ತಿಪರರಾಗಿದ್ದಾರೆ. ಪ್ರಯಾಣಕ್ಕೆ ಸಂಬಂಧಿಸಿದ ಲೇಖನವನ್ನು ಅಚ್ಚುಕಟ್ಟಾಗಿ ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದಾರೆ. ಸೌಮ್ಯಾ ಕಥೆಗಳನ್ನು ಹೇಳುವ ಹಾಗು ಪ್ರಯಾಣದ ಅನುಭವವನ್ನು ತಮ್ಮ ಲೇಖನದ ಮೂಲಕ ಹಂಚಿಕೊಳ್ಳಲು ಹೆಚ್ಚು ಇಷ್ಟ ಪಡುತ್ತಾರೆ. ತನ್ನ ವೃತ್ತಿಜೀವನದ ಅವಧಿಯಲ್ಲಿ, ಪ್ರಪಂಚದ ಅನೇಕ ಸ್ಥಳಗಳ ಬಗ್ಗೆ ರಸವತ್ತಾದ ಲೇಖನಗಳನ್ನು ಓದುಗರಿಗಾಗಿ ಬರೆಯುತ್ತಾ ಬಂದಿದ್ದಾರೆ. ಪ್ರವಾಸದಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಸೌಮ್ಯ, ಪ್ರಯಾಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಟಿಪ್ಸ್‌ಗಳನ್ನು ಕೂಡ ಹಂಚಿಕೊಳ್ಳುತ್ತಾರೆ. ವಾಸ್ತವವಾಗಿ, ಆಕೆಯ ಬರವಣಿಗೆಯ ಶೈಲಿಯು ಸ್ಪಷ್ಟ ಮತ್ತು ನಿಖರತೆಯನ್ನು ಹೊಂದಿರುತ್ತದೆ. ಓದುಗರನ್ನು ತನ್ನ ಬರವಣಿಗೆಯಿಂದ ಸೆಳೆಯುವ ವಿಶಿಷ್ಟ ಸಾಮರ್ಥ್ಯ ಆಕೆಯಲ್ಲಿದೆ. ಪ್ರಯಾಣದ ಉತ್ಸಾಹಿಗಳಿಗೆ ಅವಳ ಲೇಖನಗಳನ್ನು ಓದಲೇಬೇಕು ಎನ್ನುವ ಭಾವ ಉಂಟಾಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಸೌಮ್ಯಾ ಕೇವಲ ಪ್ರವಾಸಗಳಲ್ಲಿ ಮಾತ್ರ ಅತ್ಯಾಸಕ್ತಿ ಹೊಂದಿರುವ ವ್ಯಕ್ತಿಯಲ್ಲ, ಬದಲಾಗಿ ಕಾದಂಬರಿಗಳನ್ನು ಓದುವುದನ್ನು ಆನಂದಿಸುತ್ತಾಳೆ. ಜೊತೆಗೆ ಪ್ರತಿನಿತ್ಯ ನಡೆಯುವ ರಾಜಕೀಯ ಸುದ್ದಿಗಳ ಮಾಹಿತಿಗಳನ್ನು ಸಂಗ್ರಹಿಸುತ್ತಾಳೆ. ಒಟ್ಟಾರೆ ಸೌಮ್ಯಾ ಜೀವನದ ಬಗ್ಗೆ ವಿಶಿಷ್ಟ ದೃಷ್ಟಿಕೋನವನ್ನು ಹೊಂದಿರುವ ಸುಸಂಬದ್ಧ ವ್ಯಕ್ತಿ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ