ಆ್ಯಪ್ನಗರ

Arjun Ramesh: ಬಿಗ್ ಬಾಸ್ ಮನೆಯೊಳಗೆ ಅರ್ಜುನ್ ರಮೇಶ್ ಲಾಕ್; ಹೊರಗಡೆ ಅವರ ಸಿನಿಮಾ 'ಕೌಟಿಲ್ಯ' ರಿಲೀಸ್‌ಗೆ ರೆಡಿ!

ಬಿಗ್ ಬಾಸ್ ಕನ್ನಡ ಓಟಿಟಿ ಶೋನಲ್ಲಿ ಸ್ಪರ್ಧಿಯಾಗಿರುವ ಅರ್ಜುನ್ ರಮೇಶ್ ಅವರು ನಟರೂ ಹೌದು, ರಾಜಕಾರಣಿಯೂ ಹೌದು. ಅರ್ಜುನ್ ಬಿಗ್ ಬಾಸ್ ಮನೆಯಲ್ಲಿರುವಾಗಲೇ ಅವರ ಸಿನಿಮಾ 'ಕೌಟಿಲ್ಯ' ರಿಲೀಸ್ ಆಗುತ್ತಿದೆ. ಧಾರಾವಾಹಿ ನಟಿ ಪ್ರಿಯಾಂಕಾ ಚಿಂಚೋಳಿ ಈ ಚಿತ್ರದ ನಾಯಕಿ. ಜೋಗಿ ಪ್ರೇಮ್, ರಕ್ಷಿತ್ ಶೆಟ್ಟಿ ಮುಂತಾದ ಸ್ಯಾಂಡಲ್‌ವುಡ್ ಗಣ್ಯರು ಟ್ರೇಲರ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

Authored byಪದ್ಮಶ್ರೀ ಭಟ್ | Vijaya Karnataka Web 17 Aug 2022, 3:12 pm

ಹೈಲೈಟ್ಸ್‌:

  • ಅರ್ಜುನ್ ರಮೇಶ್, ಪ್ರಿಯಾಂಕಾ ಚಿಂಚೋಳಿ ನಟನೆಯ 'ಕೌಟಿಲ್ಯ' ಸಿನಿಮಾ ರಿಲೀಸ್
  • ಈಗ ಬಿಗ್ ಬಾಸ್ ಕನ್ನಡ ಓಟಿಟಿ ಶೋನ ಸ್ಪರ್ಧಿ ಅರ್ಜುನ್ ರಮೇಶ್
  • ಅರ್ಜುನ್ ರಮೇಶ್ ಅವರು ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ಸಿನಿಮಾ ರಿಲೀಸ್ ಆಗುತ್ತಿದೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web arjun ramesh
ಶ್ರೀ ಕಲ್ಲೂರು ಆಂಜನೇಯ ಮೂವೀಸ್ ಲಾಂಛನದಲ್ಲಿ ವಿಜೇಂದ್ರ ಬಿ.ಎ ನಿರ್ಮಿಸಿರುವ, ಪ್ರಭಾಕರ್ ಶೇರಖಾನೆ ನಿರ್ದೇಶಿಸಿರುವ 'ಕೌಟಿಲ್ಯ' ( Koutilya Movie ) ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಈಗ ಟ್ರೇಲರ್ ಸದ್ದು ಮಾಡುತ್ತಿದೆ. ಚಿತ್ರ ಆಗಸ್ಟ್ 26ರಂದು ಬಿಡುಗಡೆಯಾಗುತ್ತಿದೆ.
ಬಿಗ್ ಬಾಸ್ ಕನ್ನಡ ಓಟಿಟಿ ಸ್ಪರ್ಧಿ ಅರ್ಜುನ್ ರಮೇಶ್
ಜೋಗಿ ಪ್ರೇಮ್, ರಕ್ಷಿತ್ ಶೆಟ್ಟಿ ಮುಂತಾದ ಸ್ಯಾಂಡಲ್‌ವುಡ್ ಗಣ್ಯರು ಟ್ರೇಲರ್ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. 'ಶನಿ' ಹಾಗೂ 'ಮಹಾಕಾಳಿ' ಧಾರಾವಾಹಿಗಳಲ್ಲಿ ನಟಿಸಿರುವ, 'ಜಂಟಲ್‌ಮ್ಯಾನ್' ಚಿತ್ರದ ಮೂಲಕ ಪ್ರಸಿದ್ಧರಾಗಿರುವ, ಪ್ರಸ್ತುತ 'ಬಿಗ್ ಬಾಸ್ ಕನ್ನಡ ಓಟಿಟಿ ಶೋ' ಸ್ಪರ್ಧಿಯಾಗಿರುವ ಅರ್ಜುನ್ ರಮೇಶ್ ( Arjun Ramesh ) ಈ ಚಿತ್ರದ ನಾಯಕರು.

ಬಿಗ್ ಬಾಸ್ ಮನೆಯಲ್ಲಿ ನಾಯಕನಿರುವಾಗಲೇ ಸಿನಿಮಾ ರಿಲೀಸ್
ಅರ್ಜುನ್ ಅವರು ಬಿಗ್ ಬಾಸ್ ಶೋನಲ್ಲಿರುವಾಗಲ್ಲೇ ಅವರ ಚಿತ್ರ ಬಿಡುಗಡೆಯಾಗುತ್ತಿದೆ. "ಪ್ರಸ್ತುತ ಜನರು ಚಿತ್ರ ನೋಡುವ ರೀತಿ ಸಂಪೂರ್ಣ ಬದಲಾಗಿದೆ. ಜನ ಒಳ್ಳೆಯ ಕಥಾವಸ್ತುವುಳ್ಳ ಸಿನಿಮಾಗಳನ್ನು ನೋಡಲು ಇಷ್ಟಪಡುತ್ತಾರೆ. ಖಂಡಿತವಾಗಿಯೂ ಜನರ ಮನಸ್ಸಿಗೆ ಹತ್ತಿರವಾಗುವ ಉತ್ತಮ ಕಂಟೆಂಟ್ 'ಕೌಟಿಲ್ಯ' ಚಿತ್ರದಲ್ಲಿದೆ ಎಂಬ ಭರವಸೆ ನಿರ್ಮಾಪಕರಿಗೆ ಹಾಗೂ ನಾನು ಸೇರಿದಂತೆ ನನ್ನ ಇಡೀ ಚಿತ್ರ ತಂಡಕ್ಕೆ ಇದೆ" ಎನ್ನುತ್ತಾರೆ ನಿರ್ದೇಶಕ ಪ್ರಾಭಾಕರ್ ಶೇರಖಾನೆ.

Bigg Boss Kannada OTT: ಆ ಒಂದು ಮಾತು ಬಿಗ್ ಬಾಸ್ ಮನೆ ನೆಮ್ಮದಿ ಕೆಡಿಸಿತು; ಅರ್ಜುನ್ ರಮೇಶ್, ರೂಪೇಶ್ ಶೆಟ್ಟಿ ಮಧ್ಯೆ ಜಗಳವೋ ಜಗಳ

ನಾಯಕಿ ಪ್ರಿಯಾಂಕಾ ಚಿಂಚೋಳಿ
'ಮನಸೆಲ್ಲಾ ನೀನೆ', 'ಮನಸಾರೆ', ''ಮಹಾಕಾಳಿ' ಧಾರಾವಾಹಿಯಲ್ಲಿ ದೇವಿ ಪಾತ್ರ ಮಾಡಿದ್ದ ಪ್ರಿಯಾಂಕಾ ಚಿಂಚೋಳಿ ( Priyanka Chincholi ) ಈ ಚಿತ್ರದ ನಾಯಕಿ. ಈ ಚಿತ್ರದಲ್ಲಿ ಪ್ರಿಯಾಂಕಾ ಚಿಂಚೋಳಿ ಬಜಾರಿ ಹುಡುಗಿಯಾಗಿ ಕಾಣಿಸಿಕೊಂಡಿದ್ದಾರೆ. ನೀನಾಸಂ ಅಶ್ವತ್, ಹರಣಿ, ರಘು ಪಾಂಡೇಶ್ವರ್, ಸೂರ್ಯ ಪ್ರವೀಣ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

BBK OTT: ಕ್ಯಾಪ್ಟನ್ ಆದ ಅರ್ಜುನ್ ರಮೇಶ್ ಕೈಗೆ ಪೆಟ್ಟು!

'ಕೌಟಿಲ್ಯ' ಅಂದರೆ ಅರ್ಥಶಾಸ್ತ್ರದ ಪಿತಾಮಹ ಚಾಣಕ್ಯ. ಅರ್ಥಶಾಸ್ತ್ರದ ಒಂದು ಎಳೆಯನ್ನಿಟ್ಟುಕೊಂಡು‌ ಈ ಚಿತ್ರದ ಕಥೆ ಹೆಣೆಯಲಾಗಿದೆ. ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಗೌಸ್ ಫಿರ್ ಹಾಗೂ ಅರ್ಜುನ್ ರಮೇಶ್ ಹಾಡುಗಳನ್ನು ಬರೆದಿದ್ದು, ಕಿರಣ್ ಕೃಷ್ಣಮೂರ್ತಿ ಸಂಗೀತ ನೀಡಿದ್ದಾರೆ. ನೌಶದ್ ಆಲಮ್ ಛಾಯಾಗ್ರಹಣ ಹಾಗೂ ರಾಜ್ ಶಿವ ಸಂಕಲನ ಈ ಚಿತ್ರಕ್ಕಿದೆ.
ಲೇಖಕರ ಬಗ್ಗೆ
ಪದ್ಮಶ್ರೀ ಭಟ್
ವಿಜಯ ಕರ್ನಾಟಕ' ವೆಬ್‌ನಲ್ಲಿ ಸಿನಿಮಾ ಪತ್ರಕರ್ತೆಯಾಗಿ 2019ರಿಂದ ಪದ್ಮಶ್ರೀ ಭಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯಮಟ್ಟದಲ್ಲಿ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಇವರಿಗೆ ಇದೆ. 'ವಿಜಯ ಕರ್ನಾಟಕ' ವೆಬ್‌ನಲ್ಲಿ ಲೇಖನಗಳನ್ನು ಬರೆಯುವುದರ ಜೊತೆಗೆ ಸೆಲೆಬ್ರಿಟಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ಪುಸ್ತಕ ಓದುವುದು, ಪ್ರವಾಸ ಪದ್ಮಶ್ರೀ ಅವರ ಇಷ್ಟದ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ