ಆ್ಯಪ್ನಗರ

ನಟನೆಗೆ ಗುಡ್ ಬೈ ಹೇಳಿದ್ರಾ ಒಳ್ಳೆ ಹುಡುಗ ಪ್ರಥಮ್?

ಒಳ್ಳೆ ಹುಡುಗ ಪ್ರಥಮ್ ಚಿತ್ರರಂಗಕ್ಕೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ. ತಮ್ಮ ಕೈಯಲ್ಲಿರುವ ಕೆಲವು ಚಿತ್ರಗಳ ಪೆಂಡಿಂಗ್ ಕೆಲಸ ಹಾಗೂ ನಟಭಯಂಕರ ಸಿನಿಮಾ ರಿಲೀಸ್ ಆದ ಬಳಿಕ ಗುಡ್ ಬೈ ಹೇಳುವುದಾಗಿ ಹೇಳಿದ್ದಾರೆ. ಮುಂದೆ ತಾವು ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದಿದ್ದಾರೆ.

Vijaya Karnataka 29 Jun 2019, 3:40 pm
ಬಿಗ್ ಬಾಸ್ ಕನ್ನಡ ಸೀಸನ್ 4ರ ವಿನ್ನರ್ ಪ್ರಥಮ್ ಬಣ್ಣದ ಜಗತ್ತಿಗೆ ಗುಡ್ ಬೈ ಹೇಳಲು ಮುಂದಾಗಿದ್ದು ತಮ್ಮನ್ನು ಕೃಷಿಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ತಮ್ಮ ಸ್ವಸ್ಥಳವಾದ ಕೊಳ್ಳೆಗಾಲದಲ್ಲಿ ಸೆಟ್ಲ್ ಆಗುವುದಾಗಿ ಹೇಳಿದ್ದಾರೆ.
Vijaya Karnataka Web pratham


ಪ್ರಥಮ್ ನಟಿಸಿದ ಕೊನೆಯ ಸಿನಿಮಾ 'ಎಂಎಲ್‍ಎ'. ಸಂದರ್ಶನದಲ್ಲಿ ಮಾತನಾಡಿರುವ ಪ್ರಥಮ್, "ನಟಭಯಂಕರ" ಸಿನಿಮಾ ರಿಲೀಸ್ ಆದ ಬಳಿಕ ಹಾಗೂ ಉಳಿದ ಸಿನಿಮಾಗಳ ಕೆಲಸಗಳನ್ನು ಮುಗಿಸಿದ ಬಳಿಕ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ" ಎಂದಿದ್ದಾರೆ.

ನಟಭಯಂಕರ ಸಿನಿಮಾ ಸಸ್ಪನ್ಸ್ ಥ್ರಿಲ್ಲರ್ ಆಗಿದ್ದು, ಈ ಚಿತ್ರದಲ್ಲಿ ನಟಿಸುವ ಮೂಲಕ ಸ್ವತಃ ನಿರ್ದೇಶನವನ್ನೂ ಮಾಡಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ರಿಲೀಸ್ ಆಗಲಿದೆ. ಇದಿಷ್ಟೇ ಅಲ್ಲದೆ ಹಲವಾರು ಸಾಮಾಜಿಕ ಕಾರ್ಯಗಳನ್ನೂ ಮಾಡುತ್ತಿದ್ದಾರೆ.

ರಿಯಾಲಿಟಿ ಶೋನಿಂದ ಬಂದ ಹಣವನ್ನು ತಮ್ಮೂರಿನ ಅಭಿವೃದ್ಧಿಗೆ ವಿನಿಯೋಗಿಸಿದ್ದಾರೆ. ಅಲ್ಲದೇ, ಅನಾಥ ಮಕ್ಕಳ ಆಸರೆಗೆ ಖರ್ಚು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಹಲಗಾಪೂರ ಗ್ರಾಮದ ಕೂಲಿ ಕಾರ್ಮಿಕರ ಮಗಳು ಮೇಘಾಳ ಪದವಿ ಶಿಕ್ಷಣಕ್ಕಾಗಿ ಪ್ರಥಮ್‌ ಸಹಾಯ ಹಸ್ತ ಚಾಚಿದ್ದು, ಪದವಿ ಶಿಕ್ಷಣ ಮುಗಿಯುವ ತನಕ ಆ ಹುಡುಗಿಯ ಓದಿನ ಜವಾಬ್ದಾರಿ ಹೊತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ