ಆ್ಯಪ್ನಗರ

DKD: 'ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6' ಶೋ ಗೆದ್ದವರಿಗೆ ಸಿಗಲಿದೆ ಪವರ್ ಸ್ಟಾರ್ ಟ್ರೋಫಿ

Dance Karnataka Dance Winner: 'ಡಾನ್ಸ್ ಕರ್ನಾಟಕ ಡಾನ್ಸ್ -6' ಗ್ರಾಂಡ್ ಫಿನಾಲೆ ಇದೇ ಶನಿವಾರ ಸಂಜೆ 6ಕ್ಕೆ ಪ್ರಸಾರವಾಗಲಿದೆ. ವಿಶೇಷವಾಗಿ ಈ ಬಾರಿ ಪುನೀತ್ ರಾಜ್‌ಕುಮಾರ್ ಅವರ 'ಪವರ್ ಸ್ಟಾರ್ ಟ್ರೋಫಿ'ಯನ್ನು ಭರ್ಜರಿಯಾಗಿ ಅನಾವರಣಗೊಳಿಸಿದ್ದು ಆ ವಿಶಿಷ್ಟ ಟ್ರೋಫಿ ವಿಜೇತರ ಪಾಲಾಗಲಿದೆ.

Authored byಪದ್ಮಶ್ರೀ ಭಟ್ | Vijaya Karnataka Web 20 Sep 2022, 7:54 pm

ಹೈಲೈಟ್ಸ್‌:

  • 'ಡಾನ್ಸ್ ಕರ್ನಾಟಕ ಡಾನ್ಸ್ -6' ಗ್ರಾಂಡ್ ಫಿನಾಲೆ ಶನಿವಾರ ಸಂಜೆ 6ಕ್ಕೆ ಪ್ರಸಾರವಾಗಲಿದೆ
  • ಈ ಬಾರಿ ಪುನೀತ್ ರಾಜ್‌ಕುಮಾರ್ ಅವರ 'ಪವರ್ ಸ್ಟಾರ್ ಟ್ರೋಫಿ'ಯ ಅನಾವರಣವಾಗಲಿದೆ
  • ಈ ಬಾರಿ ಈ ಟ್ರೋಫಿ ಯಾರ ಪಾಲಾಗಲಿದೆ?


ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web did
ಜೀ ಕನ್ನಡದಲ್ಲಿ ದಕ್ಷಿಣ ಭಾರತದ ಅತಿ ದೊಡ್ಡ ಡಾನ್ಸ್ ರಿಯಾಲಿಟಿ ಶೋ 'ಡಾನ್ಸ್ ಕರ್ನಾಟಕ ಡಾನ್ಸ್ -6' ( Dance Karnataka Dance ) ಗ್ರಾಂಡ್ ಫಿನಾಲೆ ಇದೇ ಶನಿವಾರ ಸಂಜೆ 6ಕ್ಕೆ ಪ್ರಸಾರವಾಗಲಿದೆ. ವಿಭಿನ್ನ ರೀತಿಯ ನೃತ್ಯ ಪ್ರಯೋಗಗಳಿಗೆ ಸಾಕ್ಷಿಯಾಗಿರುವ ಈ ವೇದಿಕೆ ನಾಟ್ಯ ವೈಭವವನ್ನು ಇಡೀ ನಾಡಿಗೆ ಪರಿಚಯಿಸಿದ ಹೆಗ್ಗಳಿಕೆ ಹೊಂದಿದೆ.
ವಿಶೇಷವಾಗಿ ಈ ಬಾರಿ ಅಪ್ಪು ಪುನೀತ್ ರಾಜ್ ಕುಮಾರ್ ಅವರ 'ಪವರ್ ಸ್ಟಾರ್ ಟ್ರೋಫಿ'ಯನ್ನು ಭರ್ಜರಿಯಾಗಿ ಅನಾವರಣಗೊಳಿಸಿದ್ದು ಆ ವಿಶಿಷ್ಟ ಟ್ರೋಫಿ ವಿಜೇತರ ಪಾಲಾಗಲಿದೆ. ಅಷ್ಟೇ ಅಲ್ಲದೆ ಅದು ಯಾರ ಕೈಸೇರಲಿದೆ ಎಂಬ ಕುತೂಹಲ ವೀಕ್ಷಕರಲ್ಲಿ ಮನೆಮಾಡಿದೆ.

ಸತತ ಐದು ತಿಂಗಳುಗಳ ಕಾಲ ವೀಕ್ಷಕರನ್ನು ಕುಣಿಸಿ ರಂಜಿಸಿದ ಈ ಕಾರ್ಯಕ್ರಮ ಕಳೆದ ಐದು ಸೀಸನ್‌ಗಳಿಗಿಂತ ವಿಶಿಷ್ಟವಾಗಿತ್ತು. ಈ ಬಾರಿ ಕರುನಾಡ ಚಕ್ರವರ್ತಿ ಡಾ ಶಿವರಾಜ್‌ಕುಮಾರ್ ಅವರು ಡ್ಯಾನ್ಸಿಂಗ್ ಮಹಾಗುರುವಾಗಿ ಆಗಮಿಸಿದ್ದರಿಂದ ವೇದಿಕೆಗೆ ಮತ್ತಷ್ಟು ಕಳೆಗಟ್ಟಿತು ಹಾಗು ಘನತೆ ಹೆಚ್ಚಿತು ಎನ್ನುವುದು ನೋಡುಗರ ಅಭಿಪ್ರಾಯವಾಗಿದೆ.

'ನಿಮ್ಮ ರೂಪದಲ್ಲಿ ನಮ್ಮ ಪರಮಾತ್ಮನನ್ನು ಕಾಣ್ತಿದೀವಿ'; ಶಿವರಾಜ್‌ಕುಮಾರ್‌ಗೆ ಅನುಶ್ರೀ ಥ್ಯಾಂಕ್ಸ್ ಹೇಳಲು ಕಾರಣವೇನು?

ಆರಂಭದಿಂದಲೂ ಭರ್ಜರಿ ರೇಟಿಂಗ್ ಗಳಿಸುವುದರ ಮೂಲಕ ದಾಖಲೆ ನಿರ್ಮಿಸದ ಈ ಶೋ ವಾರದಿಂದ ವಾರಕ್ಕೆ ತನ್ನ ಗುಣಮಟವನ್ನು ಹೆಚ್ಚಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಅಂತಿಮವಾಗಿ 7 ಜೋಡಿಗಳು ಫಿನಾಲೆ ಹಂತಕ್ಕೆ ತಲುಪಿದ್ದು ಗೆಲುವಿನ ಕಿರೀಟ ಯಾರ ಮುಡಿಗೇರಲಿದೆ ಎನ್ನುವುದನ್ನು ವೀಕ್ಷಕರು ತುದಿಗಾಲಿನಲ್ಲಿ ನಿಂತು ಕಾಯುವಂತೆ ಮಾಡಿದೆ.

ಇನ್ನು ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿದವರೆಂದರೆ ತೀರ್ಪುಗಾರರರಾದ ದೇಶದ ಹೆಮ್ಮೆಯ ನೃತ್ಯ ನಿರ್ದೇಶಕ ಚಿನ್ನಿ ಮಾಸ್ಟರ್ , ಸ್ಯಾಂಡಲ್‌ವುಡ್‌ನ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ , ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಮತ್ತು ಡ್ಯಾನ್ಸಿಂಗ್ ಮಹಾಗುರುವಾಗಿದ್ದ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು. ಎಂದಿನಂತೆ ಅನುಶ್ರೀ ಅವರ ನಿರೂಪಣೆ ನೋಡುಗರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ತಾಯಿ ಪಾರ್ವತಮ್ಮರನ್ನ ನೆನೆದು ಕಣ್ಣೀರು ಹಾಕಿದ ಶಿವರಾಜ್‌ಕುಮಾರ್

ಇನ್ನು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ -6 ನ ಗ್ರಾಂಡ್ ಫಿನಾಲೆ ಚಿತ್ರೀಕರಣ ಇದೇ ಸೆಪ್ಟೆಂಬರ್ 21 ಬುಧವಾರದಂದು ಸಂಜೆ 5.30ಕ್ಕೆ ಕನಕಪುರದ ರೂರಲ್ ಡಿಗ್ರಿ ಕಾಲೇಜ್ ಮೈದಾನದಲ್ಲಿ ನಡೆಯಲಿದೆ. ಕನಕಪುರದ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ವಾಹಿನಿ ವಿನಂತಿಸಿದೆ.
ಲೇಖಕರ ಬಗ್ಗೆ
ಪದ್ಮಶ್ರೀ ಭಟ್
ವಿಜಯ ಕರ್ನಾಟಕ' ವೆಬ್‌ನಲ್ಲಿ ಸಿನಿಮಾ ಪತ್ರಕರ್ತೆಯಾಗಿ 2019ರಿಂದ ಪದ್ಮಶ್ರೀ ಭಟ್ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯಮಟ್ಟದಲ್ಲಿ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ ಇವರಿಗೆ ಇದೆ. 'ವಿಜಯ ಕರ್ನಾಟಕ' ವೆಬ್‌ನಲ್ಲಿ ಲೇಖನಗಳನ್ನು ಬರೆಯುವುದರ ಜೊತೆಗೆ ಸೆಲೆಬ್ರಿಟಿಗಳ ಸಂದರ್ಶನಗಳನ್ನು ಮಾಡುತ್ತಿದ್ದಾರೆ. ಪುಸ್ತಕ ಓದುವುದು, ಪ್ರವಾಸ ಪದ್ಮಶ್ರೀ ಅವರ ಇಷ್ಟದ ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ