ಆ್ಯಪ್ನಗರ

ಅಖಿಲಾಂಡೇಶ್ವರಿ ಕೋಟೆಗೆ ಎಂಟ್ರಿ ನೀಡಿದ ಎಸ್‌. ನಾರಾಯಣ್‌; 'ಪಾರು' ಧಾರಾವಾಹಿಯಲ್ಲಿ ಬಿಗ್‌ ಟ್ವಿಸ್ಟ್‌!

ಸದ್ಯ ಕನ್ನಡದ ಮುಂಚೂಣಿ ಧಾರಾವಾಹಿಗಳಲ್ಲಿ 'ಪಾರು' ಕೂಡ ಒಂದು. ಇದೀಗ ಅದರಲ್ಲಿ ಮಹತ್ವದ ಟ್ವಿಸ್ಟ್‌ ಸಿಕ್ಕಿದೆ. 'ಕಲಾ ಸಾಮ್ರಾಟ್‌' ಎಸ್‌. ನಾರಾಯಣ್‌ ಈ ಧಾರಾವಾಹಿಗೆ ಎಂಟ್ರಿ ನೀಡಿದ್ಧಾರೆ.

Vijaya Karnataka Web 19 Dec 2019, 11:26 am
ಜೀ ಕನ್ನಡ ವಾಹಿನಿಯು ಈಗಾಗಲೇ ವಿಶಿಷ್ಟ ಕಥಾ ಹಂದರವುಳ್ಳ ಧಾರಾವಾಹಿಗಳನ್ನು ನಿರ್ಮಿಸುತ್ತಿದೆ. ಕಿರುತೆರೆಯ ಸಾಂಪ್ರದಾಯಿಕ ಚೌಕಟ್ಟನ್ನೂ ಮೀರಿ, ಸತತವಾಗಿ ವೀಕ್ಷಕರ ಮುಂದೆ ಹೊಸ ಅಲೆಯ ಕಥೆಗಳನ್ನು ಕಟ್ಟಿಕೊಟ್ಟು ಮನರಂಜಿಸಿ ಯಶಸ್ವಿಯಾಗಿದೆ. ಅಂತಹ ಯಶಸ್ವೀ ಧಾರಾವಾಹಿಗಳಲ್ಲಿ 'ಪಾರು' ಧಾರಾವಾಹಿಯೂ ಒಂದು.
Vijaya Karnataka Web ಎಸ್_. ನಾರಾಯಣ್_


'ಪಾರು' ಧಾರಾವಾಹಿಯಲ್ಲಿ ಹೊಸ ಕಥೆ ಎಳೆಯೊಂದು ಶುರುವಾಗಿದ್ದು ಅದರಲ್ಲಿ ಬರುವ ವಿಭಿನ್ನ ಪಾತ್ರವೊಂದಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ 'ಕಲಾ ಸಾಮ್ರಾಟ್‌' ಎಸ್. ನಾರಾಯಣ್ ಬಣ್ಣ ಹಚ್ಚುತ್ತಿದ್ದಾರೆ. ಈಗಾಗಲೇ 'ಪಾರು' ಧಾರಾವಾಹಿ ಜನಮೆಚ್ಚುಗೆ ಪಡೆದಿದೆ. ಅರಸನ ಕೋಟೆ ಅಖಿಲಾಂಡೇಶ್ವರಿಯ ದಿಟ್ಟ ಮಾತುಗಳು, ಮುದ್ದಾದ ಹುಡುಗಿ ಪಾರುವಿನ ಮುಗ್ಧತೆ, ಆದಿತ್ಯನ ಶಿಸ್ತನ್ನು ವೀಕ್ಷಕರು ನೋಡಿದ್ದಾರೆ. ಈಗಾಗಲೇ ಅಖಿಲಾಂಡೇಶ್ವರಿ ಪಾತ್ರ ನಿರ್ವಹಿಸುತ್ತಿರುವ ವಿನಯಾ ಪ್ರಸಾದ್‌ರಿಂದ ಹಿಡಿದು ಖ್ಯಾತ ಕಲಾವಿದರನ್ನೇ ಹೊಂದಿರೋ 'ಪಾರು' ಧಾರಾವಾಹಿಗೆ ವಿಶಿಷ್ಟ ಪಾತ್ರವೊಂದರ ಮೂಲಕ ಎಸ್. ನಾರಾಯಣ್‌ ಎಂಟ್ರಿ ನೀಡಿದ್ದಾರೆ.

ಅಖಿಲಾಂಡೇಶ್ವರಿ ತನ್ನ ಇಬ್ಬರು ಮಕ್ಕಳ ಮದುವೆಗೆ ಅದ್ದೂರಿಯಾಗಿ ತಯಾರಿ ನಡೆಸಿದ್ದರೆ, ಪ್ರೀತಮ್‌ ತನ್ನ ಪ್ರೀತಿಯನ್ನು ಉಳಿಸಿಕೊಳ್ಳಲು ಸಜ್ಜಾಗಿದ್ದಾನೆ. ಅಣ್ಣ ಆದಿತ್ಯ ಮತ್ತು ಪಾರುವಿನ ಸಹಾಯ ತೆಗೆದುಕೊಂಡು ಅಮ್ಮನ ಮನವೊಲಿಸಿ ಪ್ರೀತಿಯನ್ನುಗೆಲ್ಲಲು ತಯಾರಾಗಿದ್ದಾನೆ. ಆದಿ-ಪಾರು, ಅಖಿಲಾಂಡೇಶ್ವರಿಯ ಒಪ್ಪಿಗೆ ಪಡೆದು ಪ್ರೀತಮ್‌ನ ಪ್ರೀತಿಯನ್ನ ಉಳಿಸ್ತಾರಾ? ಆ ಪ್ರೀತಿಯನ್ನ ಉಳಿಸಲು ಅವರು ಯಾವೆಲ್ಲ ಸವಾಲುಗಳನ್ನ ಎದುರಿಸಬೇಕು ಎನ್ನುವುದು ಸದ್ಯದ ಕೌತುಕ. ಇದೇ ಸಮಯದಲ್ಲಿ ಎಸ್. ನಾರಾಯಣ್‌ ಆಗಮಿಸಿದ್ದಾರೆ. ಧಾರಾವಾಹಿ ಮುಂದಿನ ದಿನಗಳಲ್ಲಿ ಏನೆಲ್ಲ ತಿರುವು ಪಡೆದುಕೊಳ್ಳಲಿದೆ ಎಂಬುದನ್ನು ಕಾದುನೋಡಬೇಕು. 'ಪಾರು' ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ-ಶುಕ್ರವಾರ ರಾತ್ರಿ 9:30ಕ್ಕೆ ಪ್ರಸಾರವಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ