ಆ್ಯಪ್ನಗರ

ಹೊಸ ಸಸ್ಪೆನ್ಸ್, ಥ್ರಿಲ್ಲರ್ ಧಾರಾವಾಹಿ 'ದೇವಯಾನಿ'

ಮಾಮೂಲು ಅತ್ತೆ ಸೊಸೆಯ ಕಾಟ ಕಿರುಕುಳ ಕಥೆಯಿಂದ ಹೊರತಾಗಿರುವ ಈ ಹೊಸ ಧಾರಾವಾಹಿ ಪ್ರತಿಯೊಂದು ಕಂತಿನಲ್ಲೂ ಕುತೂಹಲ ತಿರುವುಗಳನ್ನು ನೀಡುತ್ತಾ ಮನರಂಜಿಸುವುದರಲ್ಲಿ ಸಂಶಯವಿಲ್ಲ ಎಂದು ತಂಡದವರು ಹೇಳುತ್ತಾರೆ.

Vijaya Karnataka Web 5 Nov 2018, 4:28 pm
ದೀಪಾವಳಿಯ ಕೊಡುಗೆಯಾಗಿ ಕಿರುತೆರೆಯಲ್ಲಿ ಹೊಸ ಧಾರಾವಾಹಿ ಆರಂಭವಾಗುತ್ತಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರರ್ ಮತ್ತು ಪ್ರೇಮಕಥೆಯನ್ನು ಒಳಗೊಂಡ ಹೊಸ ಕಥೆ 'ದೇವಯಾನಿ' ಇದೇ ನವೆಂಬರ್ 12 ರಿಂದ ಸೋಮವಾರದಿಂದ ಶುಕ್ರವಾರ ಸಂಜೆ 7 ಗಂಟೆಗೆ ಉದಯ ವಾಹಿನಿಯಲ್ಲಿ ಪ್ರಸಾರವಾಗಲಿದೆ.
Vijaya Karnataka Web devayani


ದೇವಯಾನಿ 8 ವರ್ಷದಿಂದ ಶ್ರೀವತ್ಸನನ್ನ ಪ್ರೀತಿಸಿರುತ್ತಾಳೆ. ಅವರ ಪ್ರೀತಿಗೆ ಎರಡು ಮನೆಯವರಿಂದ ವಿರೋಧವಿದೆ. 8 ವರ್ಷದ ನಂತರ ಅವರ ಮದುವೆಗೆ ಎರಡು ಕುಟುಂಬ ಒಪ್ಪಿಗೆ ಕೊಟ್ಟಿದೆ. ಹೀಗೆ ಮದುವೆ ಮಂಟಪವರೆಗೂ ಬಂದಾಗ ಅಲ್ಲಿಗೆ ಬರುವ ಪವಾಡ ಪುರುಷರೊಬ್ಬರು ಈ ಮದುವೆ ನಡೆದದ್ದೇ ಆದಲ್ಲಿ ದೇವಯಾನಿ ಸಾವಾಗುತ್ತದೆ ಎಂದು ಹೇಳುತ್ತಾರೆ.

ಅದಕ್ಕೆ ಪೂರಕವಾಗಿ, ಮದುವೆ ನಿಲ್ಲಿಸಲು ಪ್ರೇಮಿಗಳ ಸುತ್ತ ಹತ್ತಾರು ಶತ್ರುಗಳು ಸೇರುತ್ತಾರೆ. ದೇವಯಾನಿ ಮತ್ತು ಶ್ರೀವತ್ಸರನ್ನು ಕೊಲ್ಲುವ ಕುತಂತ್ರ ಮಾಡುತ್ತಾರೆ. ಈ ಎಲ್ಲಾ ಅಡ್ಡಿ ಆತಂಕಗಳಿಂದ ಪಾರಾಗುವ ಈ ಜೋಡಿ ಮದುವೆಯಾಗುತ್ತಾರೆ.

ಮದುವೆ ಆದ ನಂತರವೂ ದೇವಯಾನಿ ಕಷ್ಟ ನಿಲ್ಲಲ್ಲ. ಶತಾಯ ಗತಾಯ ಶ್ರೀವತ್ಸ-ದೇವಯಾನಿ ಜೋಡಿಯನ್ನ ಬೇರ್ಪಡಿಸಲೇ ಬೇಕೆನ್ನುವ ಕೆಲ ಹಿತ ಶತ್ರುಗಳು. ಸಾವನ್ನು ಗೆದ್ದು ಮತ್ತೆ ನಿನ್ನನ್ನ ಸೇರುವೆ ಎನ್ನುವ ದೇವಯಾನಿ ಕಥೆ ಏನಾಗುತ್ತೆ? ದೇವಯಾನಿ ಸಾವನ್ನು ಹೇಗೆ ಗೆಲ್ಲುತ್ತಾಳೆ, ಶತ್ರುಗಳಿಂದ ಗಂಡನನ್ನ ಹೇಗೆ ರಕ್ಷಣೆ
ಮಾಡ್ತಾಳೆ? ಎನ್ನುವ ಕುತೂಹಲ ಅಂಶದಿಂದ ಪ್ರತಿಯೊಂದು ಸಂಚಿಕೆಯಲ್ಲೂ ತಿರುವನ್ನು ಹೊಂದಿರುವ ಅಪರೂಪದ ಧಾರಾವಾಹಿ ದೇವಯಾನಿ.

ದೇವಯಾನಿ ಧಾರಾವಾಹಿಯನ್ನು ಸುಂದರೇಶ್ ಅವರು ಓಂ ಸಾಯಿರಾಂ ಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ. ಆ್ಯಕ್ಷನ್ ಕಟ್ ಜೊತೆಗೆ ಛಾಯಾಗ್ರಹಣ ನಿರ್ವಹಣೆಯನ್ನು ನಿರ್ದೇಶಕ ಕಮ್ ಛಾಯಾಗ್ರಾಹಕ ಎಂ.ಕುಮಾರ್ ವಹಿಸಿಕೊಂಡಿದ್ದಾರೆ. ಕಥೆಯನ್ನು ಖ್ಯಾತ ಕಥೆಗಾರರಾದ ಗಿರಿಜಾ ಮಂಜುನಾಥ್ ಬರೆಯುತ್ತಿದ್ದು, ಸಂಭಾಷಣೆಯನ್ನು ಗೌತಮ್ ವಖಾರಿ ಬರೆಯುತ್ತಿದ್ದಾರೆ.

ಮಾಮೂಲು ಅತ್ತೆ ಸೊಸೆಯ ಕಾಟ ಕಿರುಕುಳ ಕಥೆಯಿಂದ ಹೊರತಾಗಿರುವ ಈ ಹೊಸ ಧಾರಾವಾಹಿ ಪ್ರತಿಯೊಂದು ಕಂತಿನಲ್ಲೂ ಕುತೂಹಲ ತಿರುವುಗಳನ್ನು ನೀಡುತ್ತಾ ಮನರಂಜಿಸುವುದರಲ್ಲಿ ಸಂಶಯವಿಲ್ಲ ಎಂದು ತಂಡದವರು ಹೇಳುತ್ತಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ