ಆ್ಯಪ್ನಗರ

ಅಪ್ಪನ ನೆನೆದು ಕಣ್ಣೀರಾದ ರವಿಚಂದ್ರನ್

ಈಗಾಗಲೇ ಉದಯ ಟಿವಿಯಲ್ಲಿ ಪ್ರಸಾರವಾಗುವ 'ಉದಯ ಸಿಂಗರ್ ಜೂನಿಯರ್ಸ್' ಕಿರುತೆರೆ ವೀಕ್ಷಕರಿಗೆ ಇಷ್ಟವಾಗಿದೆ. ನಿರ್ಣಾಯಕರಾದ ರವಿಚಂದ್ರನ್ ಮತ್ತು ಮನೋ ವೀಕ್ಷಕರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

Vijaya Karnataka Web 25 Nov 2017, 1:54 pm
ಈಗಾಗಲೇ ಉದಯ ಟಿವಿಯಲ್ಲಿ ಪ್ರಸಾರವಾಗುವ 'ಉದಯ ಸಿಂಗರ್ ಜೂನಿಯರ್ಸ್' ಕಿರುತೆರೆ ವೀಕ್ಷಕರಿಗೆ ಇಷ್ಟವಾಗಿದೆ. ನಿರ್ಣಾಯಕರಾದ ರವಿಚಂದ್ರನ್ ಮತ್ತು ಮನೋ ವೀಕ್ಷಕರಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಹಾಗೆ ಹಾಡನ್ನು ಹೇಳಿ ವೇದಿಕೆಯ ಮೇಲೆ ಸಂಗೀತದ ರಸದೌತಣವನ್ನು ನೀಡುವ ಮೂಲಕ ಮಕ್ಕಳು ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
Vijaya Karnataka Web ravichandran shed tears in udaya singer juniors
ಅಪ್ಪನ ನೆನೆದು ಕಣ್ಣೀರಾದ ರವಿಚಂದ್ರನ್


ಪ್ರತಿ ವಾರವೂ ಕೂಡ ಒಂದೊಂದು ವಿಷಯದ ಮೇಲೆ ಶೋ ನಿರ್ಮಾಣವಾಗುತ್ತದೆ. ಅಂತೇಯೇ ಈವಾರ ನಿಮಗೆ 'ಇಷ್ಟವಾದ ಹಾಡು' ಎಂಬ ವಿಷಯದ ಮೇಲೆ ಇತ್ತು. ಸ್ಪರ್ಧಿಗಳು ತಮಗೆ ಇಷ್ಟವಾದ ಹಾಡುಗಳನ್ನು ಆಯ್ಕೆ ಮಾಡಿಕೊಂಡು ಹಾಡುತ್ತಿದ್ದರು. ಸಿರಿ ಎಂಬ ಸ್ಪರ್ಧಿ ತನಗೆ ತನ್ನ ತಂದೆ ಕಂಡರೆ ಇಷ್ಟ ಎಂದು ಚೌಕ ಚಲನಚಿತ್ರದ 'ಅಪ್ಪಾ ಐ ಲವ್ ಯು ಪಾ' ಎಂಬ ಹಾಡನ್ನು ತಮ್ಮ ತಂದೆಗೋಸ್ಕರ ಹಾಡಿದಾಗ ಆ ಹಾಡನ್ನು ಕೇಳುತಿದ್ದಂತೆಯೇ ಕ್ರೇಜಿಸ್ಟಾರ್ ರವಿಚಂದ್ರನ್ ಭಾವುಕರಾದರು. ಇದೇ ಸಂದರ್ಭದಲ್ಲಿ ತಮ್ಮತಂದೆಯನ್ನು ನೆನೆಸಿಕೊಂಡು ಅವರಿಬ್ಬರ ಒಡನಾಟದ ಬಗೆಗೆ ಹಂಚಿಕೊಂಡಿದ್ದಾರೆ.

ರವಿಚಂದ್ರನ್ ಏನೇ ಕೇಳಿದರೂ ಎಷ್ಟೇ ದುಡ್ಡನ್ನು ಕೇಳಿದರೂ ಯಾವದಕ್ಕೂ ಪ್ರಶ್ನೆಮಾಡದೆ ಕೊಡುತ್ತಿದ್ದರಂತೆ. ಅಷ್ಟೇ ಅಲ್ಲದೇ ನನ್ನಲ್ಲಿ ಯಾವುದೇ ಟ್ಯಾಲೆಂಟ್ ಇಲ್ಲ, ಯಾವುದೇ ರೀತಿ ಕ್ರಿಯೇಟಿವಿಟಿ ಇಲ್ಲ ಆದರೂ ನನ್ನ ತಂದೆ ನನ್ನ ಮೇಲೆ ನಂಬಿಕೆಯನ್ನು ಇಟ್ಟುಕೊಂಡಿದ್ದರು. ಇವತ್ತು ಅವರು ನಮ್ಮ ಮಧ್ಯೆ ಇಲ್ಲವಾದರೂ ನನ್ನ ಒಳಗಡೆ ಯಾವತ್ತು ಇದ್ದೇ ಇರುತ್ತಾರೆ. ನನ್ನ ತಂದೇನೆ ಗ್ರೇಟ್ ಎಂದು ತಮ್ಮ ತಂದೆಯ ಬಗೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ಹಾಗೆ ಕ್ರೇಜಿಸ್ಟಾರ್ ತಂದೆಯನ್ನು ಕಂಡರೆ ಹೆದರುತ್ತಿದ್ದರಾ? ಕತೆ ಹೆಳುತ್ತಾ ಕಣ್ಣೀರಿಟ್ಟಿದ್ದು ಏಕೆ? ಇವೆಲ್ಲವನ್ನು ರವಿಚಂದ್ರನ್ ಅವರ ಮೂಲಕ ತಿಳಿಯೋಣ ಇದೇ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಉದಯ ಟಿವಿಯಲ್ಲಿ ಪ್ರಸಾರವಾಗುವ 'ಉದಯ ಸಿಂಗರ್ ಜೂನಿಯರ್ಸ್' ನಲ್ಲಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ