'ನವರಸ ನಾಯಕ' ಜಗ್ಗೇಶ್ಗೆ ಎದುರು ಯಾರಾದರೂ ಸಹಾಯ ಬೇಡಿದರೆ, ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಾರೆ. ಅಂತ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಈಚೆಗಷ್ಟೇ ಅನಾರೋಗ್ಯ ಪೀಡಿತರಾಗಿದ್ದ ಕಿಲ್ಲರ್ ವೆಂಕಟೇಶ್ಗೆ ಸಾಕಷ್ಟು ಸಹಾಯ ಮಾಡಿದ್ದರು. ಅಂಧ ಗಾಯಕಿಯರಾದ ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ಮನೆ ಕಟ್ಟಿಸಿಕೊಟ್ಟಿದ್ದರು. ಈಗ ವಿಶೇಷಚೇತನ ವ್ಯಕ್ತಿಯೊಬ್ಬರಿಗೆ ವೀಲ್ ಚೇರ್ ಕೊಡಿಸಿದ್ದಾರೆ. ಅಲ್ಲದೆ, ಮುಂದಿನ ಭವಿಷ್ಯಕ್ಕಾಗಿ ಇನ್ನೊಂದಿಷ್ಟು ಸಹಾಯ ಮಾಡುವ ಭರವಸೆ ನೀಡಿದ್ದಾರೆ.