Photos: ಸಿಂಪಲ್‌ ಆಗಿ ಸೆಟ್ಟೇರಿತು ಯೋಗರಾಜ್‌ ಭಟ್ಟರ 'ಪದವಿಪೂರ್ವ'! ಇಲ್ಲಿವೆ ಫೋಟೋಗಳು

Vijaya Karnataka Web 25 Nov 2020, 11:51 am
  • ಶ್ರೀವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ 'ಪದವಿಪೂರ್ವ' ಮುಹೂರ್ತ

    ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ 'ಪದವಿಪೂರ್ವ' ಚಿತ್ರದ ಮುಹೂರ್ತ ಇತ್ತೀಚೆಗೆ ರಾಜಾಜಿನಗರದ ಶ್ರೀವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ. ಖ್ಯಾತ ನಿರ್ದೇಶಕ ಹಾಗು ಸಾಹಿತಿ ಯೋಗರಾಜ್ ಭಟ್‌ ಕ್ಯಾಮರಾ ಚಾಲನೆ ಮಾಡಿದರೆ, ಚಿತ್ರದ ನಿರ್ಮಾಪಕರಾದ ರವಿ ಶಾಮನೂರು ಪುತ್ರಿ ಸೃಷ್ಠಿ ಶಾಮನೂರ್ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇನ್ನುಳಿದಂತೆ ಚಿತ್ರದ ನಾಯಕ ಪೃಥ್ವಿ ಶಾಮನೂರ್, ನಾಯಕಿಯರಾದ ಅಂಜಲಿ ಅನೀಶ್ ಹಾಗು ಯಶಾ ಶಿವಕುಮಾರ್ ಜೊತೆಗೆ ಚಿತ್ರದ ಪ್ರಮುಖ ಪಾತ್ರಧಾರಿಗಳು ಹಾಗು ತಂತ್ರಜ್ಞರು ಉಪಸ್ಥಿತರಿದ್ದು ನಿರ್ದೇಶಕ ಹರಿಪ್ರಸಾದ್ ಜಯಣ್ಣ ಅವರ ಚೊಚ್ಚಲ ನಿರ್ದೇಶನಕ್ಕೆ ಶುಭ ಹಾರೈಸಿದರು. ಚಿತ್ರದ ಮೊದಲ ಹಂತದ ಚಿತ್ರೀಕರಣ ಈಗಾಗಲೇ ಬೆಂಗಳೂರಿನಲ್ಲಿ ಶುರುವಾಗಿದ್ದು, ಚಿತ್ರದ ಎರಡನೇ ಹಂತದ ಚಿತ್ರೀಕರಣವನ್ನು ಮಲೆನಾಡಿನ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ಮಧು ತುಂಬಕೆರೆ ಸಂಕಲನ ಹಾಗು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣ ಇರಲಿದೆ.

  • ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ನಿರ್ಮಾಣದ ಸಿನಿಮಾ

  • 'ಪದವಿಪೂರ್ವ' ಚಿತ್ರಕ್ಕೆ ಪೃಥ್ವಿ ಶಾಮನೂರ್ ನಾಯಕ

  • ಹರಿಪ್ರಸಾದ್ ಜಯಣ್ಣ ಚೊಚ್ಚಲ ನಿರ್ದೇಶನದ ಚಿತ್ರ 'ಪದವಿಪೂರ್ವ'

  • ಇನ್ನಷ್ಟು ಚಿತ್ರಗಳುಡೌನ್‌ಲೋಡ್‌ ಆ್ಯಪ್‌
  • ಬೆಂಗಳೂರಿನಲ್ಲಿ ಶುರುವಾದ ಮೊದಲ ಹಂತದ ಚಿತ್ರೀಕರಣ

  • ಅಂಜಲಿ ಅನೀಶ್ ಹಾಗು ಯಶಾ ಶಿವಕುಮಾರ್ ನಾಯಕಿಯರು

  • ಸಂತೋಷ್ ರೈ ಪಾತಾಜೆ ಛಾಯಾಗ್ರಹಣದಲ್ಲಿ ಮೂಡಿಬರಲಿರುವ ಚಿತ್ರ