ಕೇಂದ್ರ ಮತ್ತು ರಾಜ್ಯ ಸರಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿರುವ ಭೂ ಸುಧಾರಣೆ ಕಾಯಿದೆ, ಎಪಿಎಂಸಿ ತಿದ್ದುಪಡಿ ಕಾಯಿದೆ, ವಿದ್ಯುಚ್ಛಕ್ತಿ ಖಾಸಗೀಕರಣ ತಿದ್ದುಪಡಿ ಕಾಯಿದೆ ವಿರೋಧಿಸಿ ಸೋಮವಾರದಿಂದ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರವೂ ಮುಂದುವರೆದಿತ್ತು. ಒಂದು ಕಡೆ 30ಕ್ಕೂ ಅಧಿಕ ರೈತ, ದಲಿತ, ಕಾರ್ಮಿಕರ ಸಂಘಟನೆಗಳು ಫ್ರೀಡಂ ಪಾರ್ಕ್ನಲ್ಲಿ ಐಕ್ಯ ಹೋರಾಟ ನಡೆಸುತ್ತಿದ್ದರೆ, ಮತ್ತೊಂದು ಕಡೆ ರೈತ ಸಂಘ ಮತ್ತು ಹಸಿರು ಸೇನೆ ಕೂಡ ಪ್ರತಿಭಟನೆ ನಡೆಸುತ್ತಿವೆ. ಮಂಗಳವಾರ ಐಕ್ಯ ಹೋರಾಟ ವೇದಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು. ಇನ್ನು, ರೈತರ ಪ್ರತಿಭಟನಾ ಸ್ಥಳಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ ನೀಡಿ ರೈತರ ಸಮಸ್ಯೆಯನ್ನು ಆಲಿಸಿದರು. ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದು, ರಸ್ತೆಯಲ್ಲಿಯೇ ಅಡುಗೆ ಮಾಡಿಕೊಂಡು ಊಟ ಮಾಡಿದ್ದು, ಅನ್ನದಾತರ ಪ್ರತಿಭಟನೆಯ ಹೈಲೆಟ್ಸ್ ಆಗಿತ್ತು. ಹಸಿರು ಸೇನೆಯ ಶಕ್ತಿ ಪ್ರದರ್ಶನದ ಫೋಟೋಗಳು ಇಲ್ಲಿವೆ.